ವರ್ಗಾವಣೆ ದಂಧೆ ಆರೋಪ; ಬೊಮ್ಮಾಯಿಗೆ ಸವದಿ ಟಾಂಗ್:
ಇಡೀ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಕಿಡಿಕಾರಿದ ಸವದಿ, ಸರ್ಕಾರ ಎಲ್ಲ ಬಗೆಯ ಸಹಾಯ ಮಾಡುತ್ತಿದ್ದು, ಯಾವುದೇ ಅಧಿಕಾರವಿಲ್ಲದೇ ಅಸಹಾಯಕತೆಯಿಂದ ಬಸವರಾಜ ಬೊಮ್ಮಾಯಿ(Basavaraj bommai) ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಒಳ್ಳೆಯ ಕೆಲಸ ಮಾಡುತ್ತಿದ್ದು, ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.
ಶಕ್ತಿ ಯೋಜನೆ(Shakti scheme)ಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಶಕ್ತಿ ಯೋಜನೆಯಿಂದ ಯಾವುದೇ ರೀತಿಯ ಆರ್ಥಿಕ ತೊಂದರೆ ಆಗಿಲ್ಲ. ಅದರಿಂದ ಸಾಕಷ್ಟುಸಹಾಯವಾಗಿದೆ. ಏಕೆಂದರೆ ಜನರು ದಿನನಿತ್ಯ ಸಾರಿಗೆ ಸಂಸ್ಥೆಗಳಲ್ಲಿ ಪ್ರತಿದಿನ ಹೆಚ್ಚು ಹೆಚ್ಚು ಪ್ರಯಾಣಿಸುತ್ತಿದ್ದಾರೆ. ಇದರಿಂದ ಸಂಸ್ಥೆಗೆ ಹೆಚ್ಚಿನ ಲಾಭವಾಗಿದೆ ಎಂದರು.
0 Comments