ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಬಸದಿಯಿಂದ ಇದ್ದಕ್ಕಿದ್ದಂತೆ ಜೈನ ಮುನಿ ನಾಪತ್ತೆಯಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಆಶ್ರಮವಾಗಿರುವ
ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿರುವುದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ 8 ಗಂಟೆಯಿಂದ ನಾಪತ್ತೆಯಾಗಿರುವ ಜೈನ ಮುನಿ. ಬುಧವಾರ ರಾತ್ರಿ 10 ಗಂಟೆಯವರೆಗೆ ಆಶ್ರಮದ ತಮ್ಮ ಕೋಣೆಯಲ್ಲಿಯೇ ಸ್ವಾಮೀಜಿ ಇದ್ದರು.
ನಿನ್ನೆ ಬೆಳಗ್ಗೆ ಭಕ್ತರು ಆಶ್ರಮಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ.
ಕಳೆದ 15 ವ?ರ್ಗಳಿಂದ ನಂದಿಪರ್ವತದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು.
ಜೈನಮುನಿಗಳು ಎಲ್ಲೇ ಹೋಗಬೇಕಿದ್ದರೂ ಪಿಂಚಿ, ಕಮಂಡಲು ತಗೆದುಕೊಂಡು ಹೋಗುವ ಪ್ರತೀತಿ. ಆದರೆ ಪಿಂಚಿ, ಕಮಂಡಲು ಕೋಣೆಯಲ್ಲಿಯೇ ಇರುವ ಹಿನ್ನೆಲೆ ಭಕ್ತರಲ್ಲಿ ಆತಂಕ ಸೃಷ್ಠಿಯಾಗಿದೆ.ಆಶ್ರಮಕ್ಕೆ ಸಂಬಂಧಿಸಿದ ಕೆಲವು ದಾಖಲೆ ಪತ್ರ ಸಹ ನಾಪತ್ತೆಯಾಗಿವೆ.
ನಿನ್ನೇ ಇಡೀ ದಿನ ಜೈನ ಆಶ್ರಮದ ಸುತ್ತಮುತ್ತ ಭಕ್ತರಿಂದ ಹುಡುಕಾಟ ನಡೆದ ಬಳಿಕ ಇಂದು ಶುಕ್ರವಾರ ಚಿಕ್ಕೋಡಿ ಪೊಲೀಸ್ ಠಾಣೆಗೆ ಸ್ವಾಮಿಜೀ ನಾಪತ್ತೆಯಾದ ಬಗ್ಗೆ ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆಯಿಂದ ದೂರು ನೀಡಿದ್ದಾರೆ.
ಘಟನೆ ಚಿಕ್ಕೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
---------
0 Comments