ರಾಹುಲ್ಗಾಂಧಿ ಅನುಕೂಲಕ್ಕೆ ಗೃಹಲಕ್ಷ್ಮಿ ಮೈಸೂರಿಗೆ ಶಿಫ್ಟ್: ಸಚಿವ ಜಾರಕಿಹೊಳಿ
ಅನ್ಯ ಕಾರ್ಯಕ್ರಮದ ನಿಮಿತ್ತ ವೈನಾಡುಗೆ ಆಗಮಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮೀಪವಾಗುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮೈಸೂರಿನಲ್ಲಿ ಆಯೋಜನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ : ಅನ್ಯ ಕಾರ್ಯಕ್ರಮದ ನಿಮಿತ್ತ ವೈನಾಡುಗೆ ಆಗಮಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮೀಪವಾಗುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮೈಸೂರಿನಲ್ಲಿ ಆಯೋಜನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಉದ್ಘಾಟನೆಯಾಗಬೇಕಿದ್ದ ಗೃಹಲಕ್ಷ್ಮಿ ಯೋಜನೆ ಮೈಸೂರಿನಲ್ಲಿ ನಡೆಯುತ್ತಿರುವ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಿರ್ಣಯದ ಪ್ರಕಾರ ಮಾಡಲಾಗುತ್ತಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವೈನಾಡುನಲ್ಲಿ ಬೇರೆ ಕಾರ್ಯಕ್ರಮ ಇರುವುದರಿಂದ ಅವರಿಗೆ ಸಮೀಪವಾಗುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಉದ್ಘಾಟನೆ ಮಾಡಲಾಗುತ್ತಿದೆ. ಈ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಕೇವಲ ಜಿಲ್ಲೆಗೆ ಸಂಬಂಧಿಸಿದ ಕಾರ್ಯಕ್ರಮವಲ್ಲ. ಗೃಹಲಕ್ಷ್ಮಿ ಯೋಜನೆ ರಾಜ್ಯಕ್ಕೆ ಸಂಬಂಧಿಸಿದ್ದು, ನಾನೂ ಮೈಸೂರಿನಲ್ಲಿನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ನಿಂದ ಬಿಜೆಪಿಗೆ ಹೋದ ಶಾಸಕರು ಈಗ ಮರಳಿ ಕಾಂಗ್ರೆಸ್ ಕರೆಸಿಕೊಳ್ಳುವ ಅಗತ್ಯ ಇಲ್ಲ. ಆದರೆ, ಅವರು ಬರುತ್ತೇನೆ ಎಂದರೆ ಕರೆದುಕೊಳ್ಳಲು ಅಭ್ಯಂತರ ಏನೂ ಇಲ್ಲ. ಯಾರೂ ಬರುತ್ತಿದ್ದಾರೆ ಎನ್ನುವ ಮಾಹಿತಿ ಇಲ್ಲ. ಅದು ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಮಾತ್ರ ಗೊತ್ತು ಎಂದರು. ನೂರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಇದೆ. ಕಾಂಗ್ರೆಸ್ನಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರಿದ್ದಾರೆ. ಈ ಪೈಕಿ 50 ಜನ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಕೊಡಲಾಗುವುದು. ಕಾರ್ಯಕರ್ತರಿಗೆ 50 ಜನರಿಗೆ ಕೊಟ್ಟರೆ ಉಳಿದವರಿಗೆ ಸಂತೋಷವಾಗುತ್ತದೆ. ಎಲ್ಲರಿಗೂ ನೀಡಲು ಸಾಧ್ಯವಿಲ್ಲ ಎಂದರು.
ಬೆಳಗಾವಿ ಜಿಲ್ಲಾ ವಿಭಜನೆಯ ಕೂಗು ಈಗ ಜೋರಾಗಿದೆ. ಬೈಲಹೊಂಗಲ ಜಿಲ್ಲೆಗಾಗಿ ಹೋರಾಟ ಮಾಡುತ್ತಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾಪ ಬಂದಾಗ ನಮ್ಮ ತಾಲೂಕು ಜಿಲ್ಲಾ ಆಗಬೇಕೆಂದು ಕೇಳಲು ಎಲ್ಲರಿಗೂ ಅಧಿಕಾರ ಇದೆ. ಅಂತಿಮವಾಗಿ ಸರ್ಕಾರ ಯಾವುದನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ನಿರ್ಧರಿಸುತ್ತದೆ ಎಂದರು. ಲೋಕಸಭಾ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಎರಡ್ಮೂರು ಸಭೆ ನಡೆಸಿ ಆಯ್ಕೆ ಮಾಡುತ್ತೇವೆ. ಜಾತಿ ಹಾಗೂ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುವುದು. ಈ ಕುರಿತು ಸಭೆಯಲ್ಲಿ ಚರ್ಚೆಯಾಗಬೇಕು. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪ್ರಕಾಶ ಹುಕ್ಕೇರಿ, ಲಕ್ಷ್ಮಣರಾವ್ ಚಿಂಗಳೆ ಆಕಾಂಕ್ಷಿಗಳಿದ್ದಾರೆ. ಬೆಳಗಾವಿಯಲ್ಲಿಯೂ ಸಾಕಷ್ಟು ಜನ ಇದ್ದಾರೆ. ಸಚಿವೆ ಹೆಬ್ಬಾಳ್ಕರ ಪುತ್ರನಿಗೆ ಟಿಕೆಟ್ ನೀಡುವ ಪ್ರಸ್ತಾಪ ನಮ್ಮ ಮುಂದೆ ತಿಳಿಸಿಲ್ಲ ಎಂದು ತಿಳಿಸಿದರು.
0 Comments