Kittur : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಶಿವನೂರಿನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ


ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಶಿವನೂರಿನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.  ಟ್ರಸ್ಟ್ (ರಿ) ಕಿತ್ತೂರು ತಾಲೂಕು ಇದರ ವತಿಯಿಂದ ಪರಮಪೂಜ್ಯ ರಾಜರ್ಷಿ  ಡಾ/ ಡಿ .ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ॥ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ  ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಶಿವನೂರ ಕಾರ್ಯಕ್ಷೇತ್ರದ ಜ್ಞಾನ ಜ್ಯೋತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಉಮೇಶ್ ರಾವುತ್ನವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ಸಾವಿತ್ರಿ ಜ್ಞಾನ ವಿಕಾಸ ಸಮನ್ವಯಾಧಿಕಾರಿಜ್ಞಾನ ವಿಕಾಸ ಕಾರ್ಯಕ್ರಮದಿಂದ ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಯಿಸಿ, ಅವರ ಸಾಮರ್ಥ್ಯವನ್ನು ಹೆಚ್ಚಿಸುವುದೇ ಆಗಿರುತ್ತದೆ.
 ಸಬಲೀಕರಣ ಸಶಕ್ತತೆ ಎಂದರೆ, ಕೆಳಗೆ ಕಾಣಿಸಿದ ಅಂಶಗಳಲ್ಲಿ ಒಟ್ಟಾರೆಯಾಗಿ ಅವರ ಅರ್ಹತೆ ಸಾಮರ್ಥ್ಯವನ್ನು ಹೆಚ್ಚಿಸುವುದು. ಸ್ವಯಂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುವುದು ಎಂದು ಮಾಡನಾಡಿದರು, I G ಚನ್ನನವರ ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಾಮಾಭಿವೃದ್ಧಿ ಯೋಜನೆಯು ನಾನಾ ಬಗೆಯ ಅತ್ಯುತ್ತಮ ಕಾರ್ಯಕ್ರಮ ಮಾಡುತ್ತಿದೆ ಎಂದು ಮಾತನಾಡಿದರು,ರುಡ್ ಸಂಸ್ಥೆ ಉಪನ್ಯಾಸಕರಾದ ಪ್ರದೀಪ್ ಮೇಲ್ಗಡೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ಯಾವ ಯಾವ ಸ್ವ ಉದ್ಯೋಗ ತೊಡಗಿಸಿಕೊಳ್ಳುವ ಕುರಿತು ಮಾಹಿತಿ ನೀಡಿದರು ಕೃಷಿ ವಲಯ, ಹೈನುಗಾರಿಕೆ, ಬಟ್ಟೆ ಬ್ಯಾಗ್ ತಯಾರಿಕೆ, ಹೊಲಿಗೆ ತರಬೇತಿ, ಕುರಿ ಕೋಳಿ ಸಾಕಾಣಿಕೆ,ಹಪ್ಪಳ ತರಬೇತಿ, ಮೆಣದಬತ್ತಿ, ಅಗರಬತ್ತಿ ಕರ್ಪೂರ, ಉಪ್ಪಿನಕಾಯಿ, ಫಿನೈಲ್, ಗೊಂಬೆ ತಯಾರಿಕೆ, ಬಿದಿರಿನಿಂದ ತಯಾರಿಸಿದ ವಸ್ತುಗಳು, ಬ್ಯೂಟಿ ಪಾರ್ಲರ್ , ಮೋಟಾರ್ ರಿಪೇರಿ, ಮೊಬೈಲ್ ಫೋನ್ ರಿಪೇರಿ ಇನ್ನಿತರ ಸ್ವ ಉದ್ಯೋಗ ತರಬೇತಿಗಳನ್ನು ರುಡ್ ಸಂಸ್ಥೆಯಲ್ಲಿ ಉಚಿತವಾಗಿ ತರಬೇತಿ ನೀಡುವ ಮೂಲಕ ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುತ್ತೇವೆ ಎಂದು ಮಾಹಿತಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಮಂಜುಳಾ ಪೂಜೆರ ಮುಖ್ಯೋಪಾಧ್ಯಾಯರಾದ V V ಚಂಗೋಲಿ ,ಮಹಾದೇವ ಗಾಳಿ ಉಧ್ಯಮಿಯರು , ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ,Vle ಕೃಷ್ಣಾ, ಜ್ಞಾನ ವಿಕಾಸ ಕೇಂದ್ರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Post a Comment

0 Comments