Navalagunda : ಸತ್ತ ಮಗು ಸ್ಮಶಾನದಲ್ಲಿ ಜೀವಂತ...!!

(ಸಾಂದರ್ಭಿಕ ಚಿತ್ರ)
ಸತ್ತ ಮಗು ಸ್ಮಶಾನದಲ್ಲಿ ಜೀವಂತ...!!
********************************
ನವಲಗುಂದ: ಮೃತಪಟ್ಟಿದ್ದ ಬಾಲಕನೊಬ್ಬನನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಮತ್ತೆ ಜೀವ ಬಂದಿರುವ ಅಚ್ಚರಿಯ ಘಟನೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನನ್ನು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಬಾಲಕ ತಂದೆ ಬಸವರಾಜ್ ಪೂಜಾರ ಹೇಳಿದರು.
ಚಿಕಿತ್ಸೆ ನೀಡಿದ್ದ ಕಿಮ್ಸ್ ವೈದ್ಯರು, ಗುರುವಾರ ಸಂಜೆ 7.30ರ ಸುಮಾರಿಗೆ ಮಗು ಮೃತಪಟ್ಟಿದೆ ಎಂದು ಹೇಳಿ ಪಾಲಕರ ಸಹಿ ಪಡೆದು, ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಿದ್ದರು.
ಮೃತದೇಹವನ್ನು ತೆಗೆದುಕೊಂಡು ಹೋಗಿ ಸ್ಮಶಾನದಲ್ಲಿ ಹೂಳುವ ಸಂದರ್ಭದಲ್ಲಿ ಸಂಪ್ರದಾಯದಂತೆ ಬಾಯಿಗೆ ನೀರು ಬಿಡಲಾಯಿತು. ಆಗ ಕೈಕಾಲು ಆಡಿಸಿದ್ದರಿಂದ ಮತ್ತೆ ನವಲಗುಂದ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರ ಸೂಚನೆ ಮೇರೆ ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Post a Comment

0 Comments