ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಪ್ರಕರಣ ಖಂಡಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಬಿವೈ ವಿಜಯೇಂದ್ರ
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯು ಶನಿವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿರುವ ಅವರು, ಇದು ಇಢೀ ರಾಜ್ಯದ ಜನರು ತಲೆ ತಗ್ಗಿಸುವ ವಿಚಾರವಾಗಿದ್ದು ರಾಜ್ಯ ಸರ್ಕಾರ ಮಾತ್ರ ಲಘುವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಲೈಟ್ಸ್:
ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಇದು ಇಡೀ ರಾಜ್ಯದ ಜನ ತಲೆ ತಗ್ಗಿಸುವ ವಿಚಾರ, ಆದರೆ ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿದೆ ಎಂದು ವಿಜಯೇಂದ್ರ ತರಾಟೆ
ಆ ಮಹಿಳೆ ಸಹಾಯಕ್ಕೆ ಸರ್ಕಾರ ಯಾಕೆ ಇರಲಿಲ್ಲ ಎಂಬ ಕೋರ್ಟ್ ಹೇಳಿಕೆಯನ್ನು ಉಲ್ಲೇಖಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ
ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

0 Comments