200 ನೇಯ ವಿಜಯೋತ್ಸವ ಹಾಗೂ ಕಿತ್ತೂರು ಉತ್ಸವ 2024ರ ಪ್ರಚಾರ ಸಾಮಗ್ರಿಗಳನ್ನು ಶಾಸಕ ಬಾಬಾಸಾಹೇಬ ಪಾಟೀಲ ಬಿಡುಗಡೆ ಮಾಡಿದರು.ಡಿ.ಸಿ ಮೊಹಮ್ಮದ್ ರೋಷನ್ ಎಸ್ಪಿ ಡಾ. ಭೀಮಾಶಂಕರ ಗುಳೇದ, ಎ.ಸಿ ಪ್ರಭಾವತಿ ಫಕ್ಕೀರಪುರ ಪಾಲ್ಗೊಂಡಿದ್ದರು
ಚನ್ನಮ್ಮನ ಕಿತ್ತೂರಿನಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿರುವ ಉತ್ಸವ ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ' ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

0 Comments