ಕಿತ್ತೂರು ವಿಜಯ ಸುದ್ದಿ ಭಾರತೀಯ ಜನತಾ ಪಾರ್ಟಿ ಕಿತ್ತೂರ ಮಂಡಲ ವತಿಯಿಂದ ಅಟಲ್ ಜೀ ಜನ್ಮ ಶತಮಾನೋತ್ಸವ ಸಮಿತಿಯ ಸಭೆಯನ್ನು ಉದ್ದೇಶಿಸಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯ ಜಿಲ್ಲಾ ಸಂಚಾಲಕ ಹಾಗೂ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಮಾತನಾಡಿ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಶತಮಾನೋತ್ಸವದ ಸಂದರ್ಭದಲ್ಲಿ ಬೂತ್, ಮಂಡಲ, ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ.ಮಟ್ಟದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಅಟಲ್ಜಿ ಅವರ ಪುಸ್ತಕ,.ಸಾಹಿತ್ಯಗಳ ಪ್ರದರ್ಶನ,ಭಾಷಣ.ಸ್ಪರ್ಧೆ,ಕಾರ್ಯಕರ್ತರ ಸನ್ಮಾನ, ಅಟಲ್ಜೀ ಅವರ ಅಪಾರ ಕೊಡುಗೆಗಳ ಪ್ರದರ್ಶನ.ನಡೆಯಲಿದೆ.ಎಂದು.ತಿಳಿಸಿದರು.ಫೆ.15ರಿಂದ ಮಾರ್ಚ್ 15ರವರೆಗೆ ಜಿಲ್ಲಾ ಮಟ್ಟದಲ್ಲಿ ಅಟಲ್ ವಿರಾಸತ್ ಸಮ್ಮೇಳನ
ಆಯೋಜಿಸಲಾಗುವುದು. ಅಲ್ಲಿಯೂ ಅಟಲ್ಜೀ ಅವರ ಬಗ್ಗೆ ಹಲವಾರು ಪುಸ್ತಕಗಳ ಪ್ರದರ್ಶನ,
ಹಿರಿಯರ.ಗೌರವ,ಅಟಲ್ಜೀ.ಅವರ ಹೋರಾಟದ ದಾರಿಯಲ್ಲಿ ಬೆಳೆದುಬಂದ ವ್ಯಕ್ತಿಗಳಿಗೆ ಗೌರವ
ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಅಟಲ್ಜೀ ಅವರು ದೇಶದ ಅಪರೂಪದ ನಾಯಕ, ಯುವಪೀಳಿಗೆ ಮತ್ತು ನಾಗರಿಕರಿಗೆ ಅವರ.ಕೊಡುಗೆ- ಸಾಧನೆಯನ್ನು ಪರಿಚಯಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು. ಇದಕ್ಕಾಗಿ ಎಲ್ಲ.ರೀತಿಯ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್ ಎಸ್ ಸಿಧ್ಧನಗೌಡ್ರ ಅವರು ಮಾತನಾಡಿ, ಅಟಲ್ ಜೀ ಅವರು ರಾಜ್ಯದಲ್ಲಿ ಪ್ರವಾಸ ಮಾಡಿದ
ಸಂಬಂಧ ಮಾಹಿತಿಯನ್ನೂ ಸಂಗ್ರಹಿಸುತ್ತಿದ್ದೇವೆ. ಫೋಟೊಗಳು,ಸ್ಮರಣಫಲಕಗಳನ್ನು ಸಂಗ್ರಹಿಸುವ.ಯೋಜನೆಯೂ ಇದೆ ಎಂದು ತಿಳಿಸಿದರು. ಫೆ. 14ರಂದು ಸಂಗ್ರಹಿತ ಮಾಹಿತಿಯ ಪ್ರದರ್ಶನ.ನಡೆಯುತ್ತದೆ ಎಂದರು.
ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಮುಖಂಡರಾದ ಲಕ್ಷ್ಮೀ ಇನಾಮದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸುಭಾಷ್ ಸಣ್ಣವೀರಪ್ಪನವರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ,ಬಸನಗೌಡ ಸಿದ್ರಾಮನಿ ಹಾಗೂ ಪ್ರಮುಖ ಮುಖಂಡರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments