ಕಿತ್ತೂರು ವಿಜಯ ಸುದ್ದಿ.ಸೋಮವಾರ ದಿನಾಂಕ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ


 ಕಿತ್ತೂರು ವಿಜಯ ಸುದ್ದಿ,ರಾಣಿ ಚನ್ನಮ್ಮನ ಕಿತ್ತೂರು : ಚನ್ನಮ್ಮನ ಕಿತ್ತೂರಿನ ಗುರುವಾರ ಪೇಟೆಯ ಕಿತ್ತೂರು ರಾಣಿ ಚನ್ನಮ್ಮಾ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಸಭಾಭವನದಲ್ಲಿ ಸೋಮವಾರ ದಿನಾಂಕ 5 ರಂದು ಮುಂಜಾನೆ 8 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 111 ನೆಯ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ ಎಂದು ಕಿತ್ತೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಸ್.ಬಿ.ದಳವಾಯಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಮಾಜಿ ಸೈನಿಕರು ಮತ್ತು ಆಯುರ್ವೇದಿಕ ವೈದ್ಯರಾದ ಡಾ॥ ಎಸ್.ಪಿ.ಹಿರೇಮಠ ಅವರು ಡಾ.ಎಸ್.ಬಿ.ದಳವಾಯಿಯವರು

ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಹಿರಿಯ ಸಾಹಿತಿಗಳಾದ ಅಂಬಡಗಟ್ಟಿಯ ಶ್ರೀ ಬಿ.ಬಿ.ಕಾದೊಳ್ಳಿ ಶಿಕ್ಷಕರನ್ನು ಸನ್ಮಾನಿಸಲಾಗುವದು. ಹಿರೇನಂದಿಹಳ್ಳಿ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ದ ಶ್ರೀ ಬಿ.ಸಿ.ಬಿದರಿ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದು ಕನ್ನಡಾಭಿಮಾನಿಗಳು ಸಮಾರಂಭದಲ್ಲಿ ಭಾಗವಹಿಸಲು ಕೋರಲಾಗಿದೆ. 


Post a Comment

0 Comments